Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:9 - ಕನ್ನಡ ಸಮಕಾಲಿಕ ಅನುವಾದ

9 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿ ಗಿಡದ ಹಾಗೆ ಪೂರ್ಣವಾಗಿ ಹಕ್ಕಲಾಯುವರು; ದ್ರಾಕ್ಷಿ ಕೂಡಿಸುವವನ ಹಾಗೆ ನಿನ್ನ ಕೈಯನ್ನು ರೆಂಬೆಗಳಲ್ಲಿ ಹಿಂದಕ್ಕೆ ತಿರುಗಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವಶಕ್ತರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಇಸ್ರಯೇಲಿನ ಅಳಿದುಳಿದವರನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯ್ದುಕೊ. ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನಿನ್ನ ಕೈಯನ್ನು ಮತ್ತೆ ರೆಂಬೆಗಳಿಗೆ ಹಾಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲಿನ ಶೇಷವನ್ನು ದ್ರಾಕ್ಷೆಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷೆಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರಿಗಿ ರೆಂಬೆಗಳಲ್ಲಿ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:9
7 ತಿಳಿವುಗಳ ಹೋಲಿಕೆ  

ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?


“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.


ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು