Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:21 - ಕನ್ನಡ ಸಮಕಾಲಿಕ ಅನುವಾದ

21 “ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: “ನೀವು ಅರ್ಪಿಸುವ ದಹನಬಲಿಗಳನ್ನು, ಸಾಧಾರಣ ಯಜ್ಞಬಲಿಗಳೆಂದು ಭಾವಿಸಿ ಅವುಗಳ ಮಾಂಸವನ್ನು ಕೂಡ ನೀವೇ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು [ಸಾಧಾರಣ] ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:21
9 ತಿಳಿವುಗಳ ಹೋಲಿಕೆ  

ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?


ಆಗ ನಿಮ್ಮ ದಹನಬಲಿಗಳನ್ನೂ, ರಕ್ತಮಾಂಸವನ್ನೂ, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸಬೇಕು. ನಿಮ್ಮ ಬಲಿಗಳ ರಕ್ತವನ್ನು ನಿನ್ನ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಸುರಿಯಬೇಕು. ಅನಂತರ ಮಾಂಸ ಊಟಮಾಡಬಹುದು.


ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು