Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:6 - ಕನ್ನಡ ಸಮಕಾಲಿಕ ಅನುವಾದ

6 ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪರದೇಶಿಯನ್ನಾಗಲಿ ಅನಾಥನನ್ನಾಗಲಿ ವಿಧವೆಯನ್ನಾಗಲಿ ಹಿಂಸಿಸದೆ ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ ನಿಮಗೆ ಹಾನಿಕರವಾದ ಅನ್ಯದೇವತಾಭಕ್ತಿಯನ್ನು ಮಾಡದೆ ಇದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:6
37 ತಿಳಿವುಗಳ ಹೋಲಿಕೆ  

ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.


ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.


ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು.


ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,


ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.


ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.


ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.


ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


“ ‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ.


ಪೂರ್ವಕಾಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲಗಳನ್ನು ಅತಿಕ್ರಮಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು