Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:9 - ಕನ್ನಡ ಸಮಕಾಲಿಕ ಅನುವಾದ

9 “ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಕಳವು ಕೊಲೆ ಹಾದರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ ಬಾಳನಿಗೆ ಹೋಮವನ್ನರ್ಪಿಸಿ ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:9
46 ತಿಳಿವುಗಳ ಹೋಲಿಕೆ  

ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;


“ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.


ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು.


ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.


ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.


ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.


ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.


ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.


ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?


ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ, ತನ್ನ ದೇವರುಗಳಿಗೆ ಧೂಪಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.


“ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


“ಆದ್ದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದ ವಿಗ್ರಹಗಳ ಹಿಂದೆ ಹೋಗುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು