Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:13 - ಕನ್ನಡ ಸಮಕಾಲಿಕ ಅನುವಾದ

13 “ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಇವರನ್ನು ನಿರ್ಮೂಲಮಾಡಿ ಕೊಚ್ಚಿಬಿಡುವೆನು; ದ್ರಾಕ್ಷೆಯ ಬಳ್ಳಿಯಲ್ಲಿಯೂ ಅಂಜೂರದ ಮರದಲ್ಲಿಯೂ ಹಣ್ಣಿರುವದಿಲ್ಲ, ಎಲೆಯು ಬಾಡುವದು; ನಾನು ಹಾಳು ಮಾಡುವವರನ್ನು ಅವರಿಗೆ ನೇವಿುಸುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:13
25 ತಿಳಿವುಗಳ ಹೋಲಿಕೆ  

ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.


ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”


ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.


ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.


ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು