Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:15 - ಕನ್ನಡ ಸಮಕಾಲಿಕ ಅನುವಾದ

15 ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:15
9 ತಿಳಿವುಗಳ ಹೋಲಿಕೆ  

ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಕೇಡು ಯೆಹೋವ ದೇವರಿಂದ ಇಳಿದು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು ವೇದನೆ ಪಡುತ್ತಾರೆ.


ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.


ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು.


ಹೊಲಕ್ಕೆ ಹೋಗಬೇಡ; ದಾರಿಯಲ್ಲಿ ನಡೆಯಬೇಡ. ಏಕೆಂದರೆ ಶತ್ರುವಿನ ಖಡ್ಗವೂ, ಅಂಜಿಕೆಯೂ ಸುತ್ತಲೂ ಇವೆ.


ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.


ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು