Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:20 - ಕನ್ನಡ ಸಮಕಾಲಿಕ ಅನುವಾದ

20 “ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಜನರು : “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಸುಗ್ಗಿಯ ಕಾಲ ಮುಗಿಯಿತು, ಬೇಸಿಗೆ ಕಾಲ ಹೋಯಿತು, ಆದರೆ ನಮಗಿನ್ನೂ ರಕ್ಷಣೆ ಆಗಲಿಲ್ಲ” ಎಂದು ಜನರು ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:20
7 ತಿಳಿವುಗಳ ಹೋಲಿಕೆ  

ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು.


ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.


ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?


ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು