Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:7 - ಕನ್ನಡ ಸಮಕಾಲಿಕ ಅನುವಾದ

7 ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:7
10 ತಿಳಿವುಗಳ ಹೋಲಿಕೆ  

ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತಿವೆ. ಪಕ್ಷಿಗಳು ಹಾಡುವ ಕಾಲ ಬಂತು. ಪಾರಿವಾಳಗಳ ಸ್ವರ ನಮ್ಮ ಊರಲ್ಲಿ ಕೇಳಿಸುತ್ತಿದೆ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಆಗ ನಾನು ಕಣ್ಣೆತ್ತಿ ನೋಡಿದಾಗ, ಇಬ್ಬರು ಸ್ತ್ರೀಯರು ಇದ್ದರು. ಅವರ ರೆಕ್ಕೆಗಳು ರಭಸವಾಗಿದ್ದವು. ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು. ಅವರು ಆಕಾಶ ಮತ್ತು ಭೂಮಿಯ ನಡುವೆ ಬುಟ್ಟಿಯನ್ನು ಎತ್ತಿದರು.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.


ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು