Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:10 - ಕನ್ನಡ ಸಮಕಾಲಿಕ ಅನುವಾದ

10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತವನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದುಹೋಗರು, ದನದ ಸದ್ದು ಕಿವಿಗೆ ಬೀಳದು, ಮೃಗಪಕ್ಷಿಗಳು ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:10
30 ತಿಳಿವುಗಳ ಹೋಲಿಕೆ  

ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.


ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ.


ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.


“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,


ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.


ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.


ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.


ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”


ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


“ಏಕೆಂದರೆ ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಿಬಿದ್ದ ನಿನ್ನ ದೇಶವೂ ಈಗ ನಿವಾಸಿಗಳಿಗೆ ಇಕ್ಕಟ್ಟಾಗುವುವು. ನಿನ್ನನ್ನು ನುಂಗಿದವರು ದೂರವಾಗುವರು.


ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ.


ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; ಅವಳಲ್ಲಿ ಯಾರೂ ವಾಸಿಸುವುದಿಲ್ಲ; ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.


“ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ.


ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ:


ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.


ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು.


ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.


ಅದನ್ನು ಹಾಳು ಮಾಡಿದ್ದಾರೆ. ಅದು ಒಣಗಿ ಬರಿದಾಗಿ ಹೋಗಿದೆ. ದೇಶವೆಲ್ಲಾ ಹಾಳಾಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ.


ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.


ನೀವು ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳಾಗುವುವು. ಪೂಜಾ ಸ್ಥಳಗಳೂ ನಾಶವಾಗುವುವು. ಹೀಗೆ ನಿಮ್ಮ ಬಲಿಪೀಠಗಳು ಸಹ ನಾಶವಾಗಿ, ನಿಮ್ಮ ವಿಗ್ರಹಗಳು ಒಡೆದುಹೋಗಿ ಇಲ್ಲದಂತಾಗುವುವು. ನೀವು ರೂಪಿಸಿದ ಎಲ್ಲವೂ ಕಡಿದು ಬಿದ್ದು ಅಳಿದುಹೋಗುವುವು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು