Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:17 - ಕನ್ನಡ ಸಮಕಾಲಿಕ ಅನುವಾದ

17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವಶಕ್ತ ಸರ್ವೇಶ್ವರ ಸ್ವಾಮಿಯ ಮಾತು : “ನಡೆಯುತ್ತಿರುವ ಕಾರ್ಯಗಳನ್ನು ಆಲೋಚಿಸಿ ನೋಡಿ ರೋದನಾ ಗಾಯಕಿಯರನ್ನು ಕರೆಯಿಸಿರಿ ಅವರಲ್ಲಿ ಜಾಣೆಯರನ್ನು ಕರೆಯ ಕಳಿಸಿರಿ ಅವರೂ ಬಂದು ಸೇರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ - [ನಿಮ್ಮ ಸಂಗತಿಯನ್ನು] ಯೋಚಿಸಿರಿ; ರೋದನಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:17
12 ತಿಳಿವುಗಳ ಹೋಲಿಕೆ  

ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.


ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.


ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.


ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.


ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ.


“ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;


“ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ:


ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು