Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:19 - ಕನ್ನಡ ಸಮಕಾಲಿಕ ಅನುವಾದ

19 ‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಿಯೋನಿನಿಂದ ಕೇಳಿಬಂದ ಪ್ರಲಾಪನೆ : “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು ! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಚೀಯೋನಿನಿಂದ ಮಹಾಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:19
20 ತಿಳಿವುಗಳ ಹೋಲಿಕೆ  

ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.


ಕಣ್ಣು ಕಾಣದವನು ಕತ್ತಲಲ್ಲಿ ತಡವಾಡುವಂತೆ ಮಧ್ಯಾಹ್ನದಲ್ಲಿ ತಡವಾಡುತ್ತಾ ಇರುವಿರಿ, ನಿಮ್ಮ ಮಾರ್ಗಗಳಲ್ಲಿ ಸಫಲವಾಗುವುದಿಲ್ಲ. ನೀವು ಯಾವಾಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ, ಸುಲಿಗೆಯನ್ನೂ ಅನುಭವಿಸುವವರಾಗುವಿರಿ.


ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.


ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು.


ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.


ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.


ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.


ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಏಕೆ ಸುಲಿಗೆಯಾದನು?


“ ‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು.


ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.


ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’


ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?”


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.


“ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು