Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:20 - ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ; ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸಮಾಡಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:20
15 ತಿಳಿವುಗಳ ಹೋಲಿಕೆ  

ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು; ದೇವರ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;


“ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”


ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.


ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.


ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.


ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು