Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:4 - ಕನ್ನಡ ಸಮಕಾಲಿಕ ಅನುವಾದ

4 “ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಿಮ್ಮ ನೆರೆಮನೆಯವರ ಬಗ್ಗೆ ಎಚ್ಚರವಹಿಸಿರಿ; ನಿಮ್ಮ ಸ್ವಂತ ಸಹೋದರನನ್ನೂ ನಂಬಬೇಡಿ. ಏಕೆಂದರೆ ಪ್ರತಿಯೊಬ್ಬ ಸಹೋದರನೂ ಮೋಸಗಾರನಾಗಿದ್ದಾನೆ. ಪ್ರತಿಯೊಬ್ಬ ನೆರೆಯವನೂ ನಿಮ್ಮ ಮರೆಯಲ್ಲಿ ನಿಮ್ಮನ್ನು ನಿಂದಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:4
28 ತಿಳಿವುಗಳ ಹೋಲಿಕೆ  

ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.


ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.


ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.


ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.


ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.


ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ.


ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:


ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.


ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.


ಅವರ ನಾಲಿಗೆ ಎಸೆದ ಬಾಣದಂತಿದೆ. ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ.


ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?


ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ಅವರಿಗೆ ದುಷ್ಟತನವೇ ಆಹಾರ, ಬಲಾತ್ಕಾರವೇ ಅವರಿಗೆ ದ್ರಾಕ್ಷಾರಸ.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು