Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:5 - ಕನ್ನಡ ಸಮಕಾಲಿಕ ಅನುವಾದ

5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ; ತಮಗೆ ಆಯಾಸವಾಗುವ ಮಟ್ಟಿಗೂ ಕೆಡುಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:5
32 ತಿಳಿವುಗಳ ಹೋಲಿಕೆ  

ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.


ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.


ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ, ‘ಏನೂ ಪ್ರಯೋಜನವಿಲ್ಲ,’ ಎಂದುಕೊಳ್ಳಲಿಲ್ಲ. ನೀನು ಹೊಸ ಬಲವನ್ನು ತಂದುಕೊಂಡು, ಬೇಸರಗೊಳ್ಳದೆ ಮುಂದುವರೆದಿರುವೆ.


ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ.


ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ.


ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.


ಅವರ ನಾಲಿಗೆ ಎಸೆದ ಬಾಣದಂತಿದೆ. ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ, ಬಂಡಿಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು,


ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.


ಅವರು ತಮ್ಮ ನಾಲಿಗೆಯನ್ನು ಖಡ್ಗದಂತೆ ಮಸೆಯುತ್ತಾರೆ.


ನೀವು ನಿಮ್ಮ ಬಾಯನ್ನು ಕೇಡಿಗೆ ಉಪಯೋಗಿಸುತ್ತೀರಿ. ನಿಮ್ಮ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.


ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು.


ನಿನ್ನ ವ್ಯರ್ಥ ಮಾತಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ಖಂಡಿಸುವುದಿಲ್ಲವೋ?


ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.


ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ.


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.


ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; ಜನರು ವ್ಯರ್ಥಕ್ಕಾಗಿಯೂ, ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.”


ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.


ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?


ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು