Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:11 - ಕನ್ನಡ ಸಮಕಾಲಿಕ ಅನುವಾದ

11 “ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:11
23 ತಿಳಿವುಗಳ ಹೋಲಿಕೆ  

ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ?


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.


ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು. ದಹನಬಲಿಗಳಲ್ಲಿ ನೀವು ಸಂತೋಷಪಡುವುದಿಲ್ಲ.


“ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.


“ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.


ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.


ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ.


“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


“ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು