13 ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.
13 ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
13 ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.
13 “ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.
“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.
“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.
ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.
ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.
ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.
“ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.