Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:5 - ಕನ್ನಡ ಸಮಕಾಲಿಕ ಅನುವಾದ

5 ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:5
25 ತಿಳಿವುಗಳ ಹೋಲಿಕೆ  

“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು.


ನಾನು ನಾಯಕರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡುವೆನು. ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, ಬಂಧನಗಳನ್ನು ಹರಿದುಬಿಟ್ಟಿದ್ದಾರೆ.


ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.


ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


ತಿರುಗಿ ಅರಸನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವನನ್ನೂ, ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯವನು ಬಂದು ಎಲೀಯನ ಮುಂದೆ ತನ್ನ ಮೊಣಕಾಲೂರಿಕೊಂಡು ಅವನಿಗೆ, “ದೇವರ ಮನುಷ್ಯನೇ, ನೀನು ದಯಮಾಡು, ನನ್ನ ಪ್ರಾಣವೂ, ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:


ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.


ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು