Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:3 - ಕನ್ನಡ ಸಮಕಾಲಿಕ ಅನುವಾದ

3 ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:3
40 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು?


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”


ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,


ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.


ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ನನ್ನ ಬಳಿಗೆ ಬಂದವರು,” ಎಂದು ಹೇಳಿದನು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.


ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.


ಲಾಬಾನನ ಮಕ್ಕಳು, “ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತೆಗೆದುಕೊಂಡು, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ,” ಎಂದು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.


“ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು.


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.


ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ.


ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.


ತಮಗೆ ಪ್ರಯೋಜನವಾಗದೆ ಸಹಾಯಕ್ಕೂ, ಪ್ರಯೋಜನಕ್ಕೂ ಅಲ್ಲ. ನಿಂದೆಗೂ, ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.


ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.


ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”


ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡುತ್ತೇನೆ. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಪರಿಶುದ್ಧ ದಿವಸದಲ್ಲಿಯೂ, ಯೆಹೋವ ದೇವರ ಹಬ್ಬಗಳ ದಿವಸದಲ್ಲಿಯೂ ನೀನು ಏನು ಮಾಡುತ್ತೀ?


ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.


ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು.


ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು