Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:34 - ಕನ್ನಡ ಸಮಕಾಲಿಕ ಅನುವಾದ

34 ಅವರು ಅಡವಿಯ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನು ಪರಾಕ್ರಮಿಯಾಗಿರುವವರ ಮುಂದೆ ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಕಾಡಿನ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನಿನ ಭವ್ಯ ಮರಗಳು ಬಿದ್ದುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಎತ್ತರ ಮರಗಳು ನೆಲದ ಪಾಲಾಗುವವು; ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಮುಟ್ಟಿನಿಂದ ಕಡಿದುಬಿಡುವನು; ಲೆಬನೋನಿನ ವನವು ಆ ಬಲಿಷ್ಠನಿಂದ ಬಿದ್ದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋವನು ತನ್ನ ಕೊಡಲಿಯಿಂದ ಅಡವಿಯನ್ನು ಕಡಿದುಹಾಕುವನು. ಲೆಬನೋನಿನ ಉನ್ನತ ಮರಗಳು (ಪ್ರಮುಖರು) ಉರುಳಿಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:34
19 ತಿಳಿವುಗಳ ಹೋಲಿಕೆ  

ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು.


ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.


“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’


ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು.


ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡುತ್ತೇನೆ. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.


ದೇಹಾತ್ಮದಂಥ ಅದರ ಉದ್ಯಾನವನವನ್ನೂ, ಫಲಭರಿತ ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.


ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳೂ ಹಾಗೂ ಬಾಷಾನಿನ ಎಲ್ಲಾ ಏಲಾ ಮರಗಳ ಮೇಲೆಯೂ


ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು