Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:5 - ಕನ್ನಡ ಸಮಕಾಲಿಕ ಅನುವಾದ

5 “ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:5
31 ತಿಳಿವುಗಳ ಹೋಲಿಕೆ  

ಅವರು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ, ಅಸ್ಸೀರಿಯರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಮರುಭೂಮಿಯಂತೆ ಒಣಗಿದ್ದಾಗಿಯೂ ಮಾಡುವರು.


ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.


ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.


ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.


ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ


“ ‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.


ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”


ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.


ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,


ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.


ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು.


ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.


ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.


ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.


ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.


“ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ.


ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”


ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.


ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು