Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:6 - ಕನ್ನಡ ಸಮಕಾಲಿಕ ಅನುವಾದ

6 ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:6
38 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಈಜಿಪ್ಟ್ ಬೆಚ್ಚಿ ಬೀಳುವುದಕ್ಕೆ ಯೆಹೂದ ದೇಶವು ಕಾರಣವಾಗುವುದು, ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನು ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿಗೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆಯನ್ನು ತಿಳಿದು ಬೆರಗಾಗುವನು.


ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ:


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು. ನನ್ನ ಉರಿಯಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು. ಅವರ ರಕ್ತವನ್ನು ಭೂಮಿಗೆ ಸುರಿಸಿದೆನು.”


“ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ. ಜನಾಂಗಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ. ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ್ನ ಉರಿಯಲ್ಲಿ ಅವರನ್ನು ಜಜ್ಜಿದ್ದೇನೆ. ಆದ್ದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಸಿಡಿದು, ನನ್ನ ವಸ್ತ್ರಕ್ಕೆ ಮೆತ್ತಿಕೊಂಡಿದೆ;


“ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇ. ಸೂರ್ಯೋದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸುವನು. ಅವನು ಜೇಡಿ ಮಣ್ಣಿನಂತೆಯೂ, ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಅವನು ಬರುವನು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು, ದರ್ಶನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಭಯಭ್ರಾಂತಿಯ ದಿನವನ್ನು ಇಟ್ಟಿದ್ದಾರೆ. ಅದು ಗೋಡೆಗಳು ಹೊಡೆದುರುಳಿಸುವ ದಿನವು. ಪರ್ವತಗಳಿಗೆ ಜನರು ಕೂಗಾಡುವ ದಿನವದು.


ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ. ಪ್ರಾಯದ ಸಿಂಹ ಆರ್ಭಟಿಸಿದಂತಿದೆ. ಹೌದು, ಗರ್ಜಿಸುತ್ತಾ ಬೇಟೆಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ, ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.


ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುವರು.


ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.


ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಾನು ಸುಲಿಗೆಯನ್ನು ಮತ್ತು ಕೊಳ್ಳೆಯನ್ನು ತೆಗೆದುಕೊಳ್ಳುವೆನು. ಹೀಗೆ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳನ್ನು ಎದುರಿಸುವೆನು. ಜನಾಂಗಗಳಿಂದ ಒಟ್ಟುಗೂಡಿ, ಪಶುಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಿಸುವವರ ಮೇಲೆಯೂ ಕೈಹಾಕುವೆನು,” ಎಂದು ಹೇಳುವೆ.


ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’


ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ.


ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.


ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು