Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:9 - ಕನ್ನಡ ಸಮಕಾಲಿಕ ಅನುವಾದ

9 ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:9
23 ತಿಳಿವುಗಳ ಹೋಲಿಕೆ  

ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.


ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.


ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:


ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.


ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.


ಹಮಾತ್, ಅರ್ಪಾದ್, ಸೆಫರ್ವಯಿಮಿನ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?


ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ದಾವೀದನು ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,


ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು


ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?


ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?


ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?


ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.


ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?


ಹಮಾತೂ ಬೇರೋತವು, ದಮಸ್ಕದವರೆಗೂ ಹಾಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


ಅವರ ಅರಸನನ್ನು ಧಿಕ್ಕರಿಸುವರು; ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು.


ರಾಜ ಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತು ಹೋದರು. ಅವನು ಒಪ್ಪಂದವನ್ನು ಮೀರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರ ಮಾಡಿ, ಯಾವ ಮನುಷ್ಯನನ್ನು ಗಣನೆಗೆ ತಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು