Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:3 - ಕನ್ನಡ ಸಮಕಾಲಿಕ ಅನುವಾದ

3 ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಭಯವು ಅವನಿಗೆ ಪರಿಮಳಿಸುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡುವದಿಲ್ಲ, ಕಿವಿಗೆ ಬಿದ್ದಂತೆ ನಿರ್ಣಯಿಸುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಯೆಹೋವನನ್ನು ಸನ್ಮಾನಿಸುತ್ತಾ ಸಂತೋಷಿಸುವನು. ಆತನು ಜನರಿಗೆ ನ್ಯಾಯತೀರಿಸುವುದು ಹೊರತೋರಿಕೆಯ ಆಧಾರದ ಮೇಲಲ್ಲ; ಕೇಳಿಕೊಂಡದ್ದರ ಆಧಾರದ ಮೇಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:3
20 ತಿಳಿವುಗಳ ಹೋಲಿಕೆ  

ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.


ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.


ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ; ದೇವರ ಅರಿವನ್ನು ಕಂಡುಕೊಳ್ಳುವೆ.


ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ.


ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”


ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.


ಬಾಯಿಯು ಆಹಾರವನ್ನು ರುಚಿ ನೋಡುವಂತೆ ಕಿವಿಯು ನುಡಿಗಳನ್ನು ವಿವೇಚಿಸುವುದಿಲ್ಲವೇ?


ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು.


ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು.


ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು