Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:9 - ಕನ್ನಡ ಸಮಕಾಲಿಕ ಅನುವಾದ

9 ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಪರಿಶುದ್ಧಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವದಿಲ್ಲ, ಯಾರೂ ಹಾಳು ಮಾಡುವದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:9
44 ತಿಳಿವುಗಳ ಹೋಲಿಕೆ  

ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಪೂರ್ವದಿಂದ ಪಶ್ಚಿಮದವರೆಗೆ ಇರುವವರೆಲ್ಲರೂ ನನ್ನ ಹೊರತು ಮತ್ತೊಬ್ಬನು ಇಲ್ಲ, ನಾನೇ ಯೆಹೋವ ದೇವರು ಮತ್ತೊಬ್ಬ ದೇವರು ಇಲ್ಲ ಎಂದು ನನ್ನನ್ನು ತಿಳಿದುಕೊಳ್ಳುವರು.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ, ಈ ಪರ್ವತ ನಾಡಿಗೂ ಅವರನ್ನು ಬರಮಾಡಿದರು.


ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು.


ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”


“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.


ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು