Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. ಅವರ ಮನೆಗಳು ನರಿಗಳಿಂದ ತುಂಬಿರುವುವು, ಅಲ್ಲಿ ಗೂಬೆಗಳು ವಾಸಿಸುವುವು ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದು ಕಾಡುಮೃಗಗಳಿಗೆ ಹಕ್ಕೆಯಾಗುವದು, ಅಲ್ಲಿನ ಮನೆಗಳಲ್ಲಿ ಗೂಬೆಗಳು ತುಂಬಿಕೊಳ್ಳುವವು, ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಲ್ಲಿ ಮರುಭೂಮಿಯ ಕಾಡುಪ್ರಾಣಿಗಳು ಮಾತ್ರವೇ ವಾಸಿಸುವವು. ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ಉಷ್ಟ್ರಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:21
10 ತಿಳಿವುಗಳ ಹೋಲಿಕೆ  

ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


“ಆದ್ದರಿಂದ ಅರಣ್ಯದ ಕಾಡುಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವುವು; ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ.


ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.


ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು, ಅದರ ಹಾಳುಬಿದ್ದ ಮನೆಯ ಕಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಗಳಿಂದ ಕೇಳಿಬರುವುದು, ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು, ದೇವದಾರು ಮರದ ತೊಲೆಗಳು ಕಳಚಿಬೀಳುವುವು.


ಉಷ್ಟ್ರಪಕ್ಷಿ, ಚೀರು ಗೂಬೆ, ಕಡಲ ಹಕ್ಕಿ ಮತ್ತು ಅದರ ಪ್ರತಿಯೊಂದು ಜಾತಿಯ ಗಿಡುಗ.


“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು