Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:22 - ಕನ್ನಡ ಸಮಕಾಲಿಕ ಅನುವಾದ

22 ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅರಮನೆಗಳಲ್ಲಿ ತೋಳಗಳೂ, ವಿಲಾಸಮಂದಿರಗಳಲ್ಲಿ ನರಿಗಳೂ ಎದುರುಬದುರಾಗಿ ಕೂಗುವವು; ಅದಕ್ಕೆ ಹೊತ್ತು ಸಮೀಪಿಸಿದೆ, ಇನ್ನು ದಿನ ಹೆಚ್ಚದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:22
19 ತಿಳಿವುಗಳ ಹೋಲಿಕೆ  

ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”


ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.


ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


“ಮೋವಾಬಿಗೆ ಆಪತ್ತು ಬರುವುದಕ್ಕೆ ಸಮೀಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.


ನರಿಗಳೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಹಾಲು ಕುಡಿಸುತ್ತವೆ. ಆದರೆ ನನ್ನ ಜನರು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿದ್ದಾರೆ.


ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.


“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಮರುಭೂಮಿಯ ಕಾಡುಮೃಗಗಳು ತೋಳಗಳೊಂದಿಗೆ ಸಂಧಿಸುವುವು, ಕಾಡುಮೇಕೆಗಳು ಪರಸ್ಪರ ಕರೆಯುತ್ತವೆ. ರಾತ್ರಿ ಮೃಗಗಳು ಸಹ ಅಲ್ಲಿ ಮಲಗುತ್ತವೆ. ತಮಗಾಗಿ ವಿಶ್ರಾಂತಿ ಸ್ಥಳಗಳನ್ನು ಕಂಡುಕೊಳ್ಳುತ್ತವೆ.


ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು, ಅದರ ಹಾಳುಬಿದ್ದ ಮನೆಯ ಕಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಗಳಿಂದ ಕೇಳಿಬರುವುದು, ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು, ದೇವದಾರು ಮರದ ತೊಲೆಗಳು ಕಳಚಿಬೀಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು