Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:6 - ಕನ್ನಡ ಸಮಕಾಲಿಕ ಅನುವಾದ

6 ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:6
39 ತಿಳಿವುಗಳ ಹೋಲಿಕೆ  

ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.


ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.


ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.


ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.


ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: “ ‘ಅಯ್ಯೋ! ಅಯ್ಯೋ! ಮಹಾನಗರಿಯೇ, ಬಲಿಷ್ಠನಗರಿ ಬಾಬಿಲೋನೇ! ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ ಎಂದು ಶೋಕಿಸುವರು.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.


ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.


ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.


ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.


“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.


ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.


“ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ. ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ. ನನ್ನ ನಾಮವು ಪ್ರತಿದಿನವೂ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ! ಎಂದು ಯೆಹೋವ ದೇವರು ಹೇಳುತ್ತಾರೆ.


ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.


“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.


ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.


ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು.


“ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.


ಯೆಹೋವ ದೇವರ ದಿನವು ಬರುತ್ತದೆ. ಓ ಯೆರೂಸಲೇಮೇ, ಆ ದಿನದಲ್ಲಿ ನಿನ್ನ ಐಶ್ವರ್ಯವು ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ನಿನ್ನ ಗೋಡೆಗಳ ಮಧ್ಯದಲ್ಲಿ ಹಂಚಿಹೋಗುವುದು.


ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು