Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:31 - ಕನ್ನಡ ಸಮಕಾಲಿಕ ಅನುವಾದ

31 ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕುಂದಿಹೋಗಿರಿ! ಬಡಗಲಿಂದ ಹೊಗೆಯು ಬರುತ್ತಿದೆ. ಆ ವ್ಯೂಹದಲ್ಲಿ ಹಿಂದು ಬೀಳುವವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:31
13 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.


ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.


ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.


ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ.


ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.


ಯೆಹೋವ ದೇವರ ಗ್ರಂಥದಲ್ಲಿ ನೀವು ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ತಪ್ಪದು. ಜೊತೆಯಿಲ್ಲದೆ ಒಂದೂ ಇರುವುದಿಲ್ಲ. ಏಕೆಂದರೆ ನನ್ನ ಬಾಯಿಯೇ ಅದನ್ನು ಆಜ್ಞಾಪಿಸಿತು. ಅವರ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು.


ನಾನು ನಿನ್ನ ಮುಂದೆ ಹೋಗಿ ಬೆಟ್ಟಗುಡ್ಡಗಳನ್ನು ಸಮಮಾಡಿ, ಕಂಚಿನ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.


ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು