Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:6 - ಕನ್ನಡ ಸಮಕಾಲಿಕ ಅನುವಾದ

6 ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಯೆಹೋವನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:6
23 ತಿಳಿವುಗಳ ಹೋಲಿಕೆ  

ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


“ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’ ”


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ; ರಹಾಬನ ಸಹಾಯಕರು ಸಹ ದೇವರ ಕಾಲಿಗೆ ಅಡ್ಡಬಿದ್ದರಲ್ಲಾ.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಆಳುತ್ತಿದ್ದ ದುಷ್ಟರ ಕೋಲನ್ನೂ, ಅಧಿಪತಿಗಳ ದಂಡವನ್ನೂ ಯೆಹೋವ ದೇವರು ಮುರಿದುಬಿಟ್ಟರು.


ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.


ಹೀಗಿರುವುದರಿಂದ ನಿರಂತರವಾಗಿ ಅವರು ತಮ್ಮ ಬಲೆಯನ್ನು ಬರಿದುಮಾಡಿ, ಕರುಣೆ ಇಲ್ಲದೆ ಜನಾಂಗಗಳನ್ನು ನಾಶ ಮಾಡುತ್ತಾ ಅವನು ಹೋಗಬೇಕೇ?


ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.


ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ, ‘ಬಲವಾದ ಕೋಲೂ, ಮಹಿಮೆಯ ಬೆತ್ತವೂ ಹೇಗೆ ಮುರಿದುಹೋಯಿತು?’ ಎಂದು ಹೇಳಿರಿ.


ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು