Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:10 - ಕನ್ನಡ ಸಮಕಾಲಿಕ ಅನುವಾದ

10 ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಕಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ; ಹೀಗಿರಲು ನೀನು ಇಷ್ಟವಾದ ಗಿಡಗಳನ್ನು ನೆಟ್ಟು ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ಹಾಕಿದ್ದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:10
48 ತಿಳಿವುಗಳ ಹೋಲಿಕೆ  

ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.


ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ.


ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಆಕಾಶವನ್ನು ಹಾಸಿ, ಭೂಮಿಯ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟುಮಾಡಿದ ಯೆಹೋವ ದೇವರನ್ನು ನೀನು ಮರೆತುಬಿಟ್ಟು, ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶಪಡಿಸುವನೋ ಎಂಬಂತೆ ಅಂಜಿಕೊಂಡಿದ್ದೀಯಲ್ಲಾ, ಆ ಹಿಂಸಕನ ಕೋಪವು ಎಲ್ಲಿ?


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.


ನಮ್ಮ ರಕ್ಷಕ ಆಗಿರುವ ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ, ನಮ್ಮ ಮೇಲಿರುವ ನಿಮ್ಮ ಅಸಂತೋಷವನ್ನು ತೊಲಗಿಸಿರಿ.


ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.


ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ, ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ. ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ. ನಮ್ಮ ಪಾಪಗಳನ್ನು ತೊಳೆದುಬಿಡಿರಿ.


ನಮ್ಮ ರಕ್ಷಣೆಯ ದೇವರೇ, “ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸಿರಿ, ಜನಾಂಗಗಳೊಳಗಿಂದ ನಮ್ಮನ್ನು ಬಿಡುಗಡೆ ಮಾಡಿ ಒಂದುಗೂಡಿಸಿರಿ.”


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.


ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.


ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.


ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.


ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.


ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”


ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; ಬೇಗ ಬಂದು ನನ್ನನ್ನು ಬಿಡಿಸಿರಿ; ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, ಬಲವಾದ ಕೋಟೆಯೂ ಆಗಿರಿ.


ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.


ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.


ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.


ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ, ಚಿಗುರುಗಳನ್ನು ಕಡಿದುಹಾಕುವರು.


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು.


ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.


ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ”


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”


ಬೀಜಗಳು ಹೆಂಟೆಗಳ ಕೆಳಗೆ ಕೆಟ್ಟು ಹೋಗಿವೆ. ಉಗ್ರಾಣಗಳು ನಾಶವಾಗಿವೆ. ಕಣಜಗಳು ಕುಸಿದುಬಿದ್ದಿವೆ. ಏಕೆಂದರೆ ಧಾನ್ಯವು ಒಣಗಿದೆ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು