Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:14 - ಕನ್ನಡ ಸಮಕಾಲಿಕ ಅನುವಾದ

14 ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:14
24 ತಿಳಿವುಗಳ ಹೋಲಿಕೆ  

ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.


ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ.


ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”


ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.


ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.


ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳು ರಾತ್ರಿಯ ದರ್ಶನದ ಕನಸಿನಂತೆ ಮಾಯವಾಗುವುವು.


ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕ ಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.


ಅವರೇ ಅವುಗಳಿಗೋಸ್ಕರ ಚೀಟು ಹಾಕಿದ್ದಾರೆ. ಅವರ ಕೈಯೇ ಅದನ್ನು ಗೆರೆ ಎಳೆದು, ಅವರಿಗೆ ಹಂಚಿಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿಕೊಳ್ಳುವುವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವುವು.


ನಿನ್ನೊಡನೆ ಹೋರಾಡಿದವರನ್ನು ಹುಡುಕಿದವರೂ ಅವರು ನಿನಗೆ ಕಾಣಿಸರು. ನಿನ್ನ ಸಂಗಡ ಯುದ್ಧ ಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.


ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.


ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”


ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.


ಆತನ ಶ್ವಾಸವು ತುಂಬುತ್ತಾ, ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.


ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು