Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:3 - ಕನ್ನಡ ಸಮಕಾಲಿಕ ಅನುವಾದ

3 ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಫ್ರಾಯೀವಿುಗೆ ರಕ್ಷಣೆಯಾಗಿರುವ ಕೋಟೆಯೂ ದಮಸ್ಕವು ನಡಿಸುವ ರಾಜ್ಯಾಧಿಕಾರವೂ ಇಲ್ಲವಾಗುವವು; ಅರಾಮ್ಯರಲ್ಲಿ ಉಳಿದವರಿಗೆ ಇಸ್ರಾಯೇಲ್ಯರ ಮಹಿಮೆಯ ಗತಿಯಾಗುವದು ಎಂಬದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:3
27 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಘನತೆಯು ಪಕ್ಷಿಯಂತೆ ಹಾರಿಹೋಗುವುದು. ಜನನವಿಲ್ಲ, ಗರ್ಭಧಾರಣೆ ಇಲ್ಲ, ಪ್ರಸವವಿಲ್ಲ.


ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.


ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.


ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.


ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”


ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ


ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.


ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.


ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ.


ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.


ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು