Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:6 - ಕನ್ನಡ ಸಮಕಾಲಿಕ ಅನುವಾದ

6 ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಎಣ್ಣೆಯ ಮರವನ್ನು ಬಡಿದ ಬಳಿಕ ಮೇಲಿನ ಕೊಂಬೆಯ ಕೊಟ್ಟಕೊನೆಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ರೆಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು, ನಿಂತಿರುವಂತೆ ಹಕ್ಕಲು ಅದರಲ್ಲಿ ಉಳಿದಿರುವದು ಎಂದು ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:6
16 ತಿಳಿವುಗಳ ಹೋಲಿಕೆ  

ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


“ನಿನ್ನಲ್ಲಿ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ? ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ?


ಅವನು ಅವರಿಗೆ, “ನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿದೆನು? ಅಬೀಯೆಜೆರನ ದ್ರಾಕ್ಷಿ ಫಲ ಕೂಡಿಸುವುದಕ್ಕಿಂತ ಎಫ್ರಾಯೀಮನ ಉಳಿದ ದ್ರಾಕ್ಷಿಗಳನ್ನು ಸಂಗ್ರಹಿಸುವುದು ಉತ್ತಮವಲ್ಲವೇ?


ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.


ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.


ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು