Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:9 - ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ, ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ದಿನದಂದು ನಾಡಿನ ಸುಭದ್ರವಾದ ನಗರಗಳು ನಿರ್ಜನ ಪ್ರದೇಶಗಳಾಗುವುವು. ಇಸ್ರಯೇಲರಿಗೆ ಹೆದರಿ ಅಮೋರ್ಯರು ಮತ್ತು ಹಿವ್ವಿಯರು ಬಿಟ್ಟುಹೋದ ಹಾಳು ನಿವೇಶನಗಳಂತಾಗುವುವು, ನಾಡೆಲ್ಲ ಹಾಳುಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು [ಪೂರ್ವದಲ್ಲಿ] ಇಸ್ರಾಯೇಲ್ಯರ ಭಯದಿಂದ ನಿರ್ಜನವಾಗಿದ್ದ ಈಗ ಅಡವಿಯಲ್ಲಿಯೂ ಬೆಟ್ಟಗಳ ತುದಿಯ ಮೇಲೂ ಕಾಣುವ ಪಾಳು ನಿವೇಶನಗಳಂತಿರುವವು; ಅಂತು ದೇಶವೆಲ್ಲಾ ಹಾಳಾಗಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:9
16 ತಿಳಿವುಗಳ ಹೋಲಿಕೆ  

ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು.


ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ನಿನ್ನ ದೇಶದ ಪಟ್ಟಣಗಳನ್ನು ನಾಶಮಾಡಿಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.


“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”


ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ


ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.


ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು