Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:1 - ಕನ್ನಡ ಸಮಕಾಲಿಕ ಅನುವಾದ

1 ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳು ಪಟಪಟನೆ ಆಡುವ ನಾಡು, ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದೀಮಾರ್ಗವಾಗಿ ಕಳುಹಿಸುವ ದೇಶ, ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:1
18 ತಿಳಿವುಗಳ ಹೋಲಿಕೆ  

ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು.


ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,


ಕೂಷ್ ದೇಶದವರೇ, ನೀವೂ ಸಹ ನನ್ನ ಖಡ್ಗದಿಂದ ಹತರಾಗುವಿರಿ.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.


ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.


ಏಕೆಂದರೆ ನೀವೇ ನನಗೆ ಸಹಾಯಕರಾಗಿದ್ದೀರಿ. ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಹಾಡುತ್ತಿರುವೆನು.


ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.


ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ, ನಿಮ್ಮ ರೆಕ್ಕೆಗಳ ನೆರಳಿನಲ್ಲಿ ನನ್ನನ್ನು ಮರೆಮಾಡಿರಿ.


ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು