Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಅವರ ಮಧ್ಯದಲ್ಲಿ ತತ್ತರಿಸುವ ಆತ್ಮವನ್ನು ಸುರಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಈಜಿಪ್ಟ್ ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅದರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಿಸಿದ್ದಾನೆ; ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:14
20 ತಿಳಿವುಗಳ ಹೋಲಿಕೆ  

ಇದೇ ಕಾರಣದಿಂದ ದೇವರು ಅವರ ಮೇಲೆ ವಂಚಿಸಲು ಶಕ್ತಿಯುಳ್ಳ ಭ್ರಮೆಯನ್ನು ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುವರು.


“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’


ನಾಯಕರು ಬೆಳಕು ಇಲ್ಲದ ಕತ್ತಲೆಯಲ್ಲಿ ತಡಕಾಡುವಂತೆಯೂ ಅವರು ಮತ್ತೇರಿದವರಂತೆ ದಿಗ್ಭ್ರಮೆಗೊಳಿಸುವಂತೆಯೂ ಮಾಡಲು ದೇವರು ಶಕ್ತರು.


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


“ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ಇದಲ್ಲದೆ ನಾನು ಈಜಿಪ್ಟಿನವನಿಗೆ ವಿರೋಧವಾಗಿ ಈಜಿಪ್ಟಿನವನನ್ನು ಎಬ್ಬಿಸುವೆನು. ಸಹೋದರನಿಗೆ ವಿರುದ್ಧವಾಗಿ ಸಹೋದರನೂ, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೊರಾಡುವವು.


ಬಲವೂ, ಜ್ಞಾನವೂ ದೇವರಲ್ಲಿವೆ; ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು.


ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.


“ಆದ್ದರಿಂದ ಇಗೋ, ಯೆಹೋವ ದೇವರು ಈ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.


ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.


ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.


ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು