Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:18 - ಕನ್ನಡ ಸಮಕಾಲಿಕ ಅನುವಾದ

18 ಆ ದಿವಸದಲ್ಲಿ ಈಜಿಪ್ಟಿನ ಐದು ಪಟ್ಟಣಗಳು ಸೇನಾಧೀಶ್ವರ ಯೆಹೋವ ದೇವರಿಗೆ ಆಣೆಯಿಟ್ಟುಕೊಳ್ಳುವವು. ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಈಜಿಪ್ಟ್ ದೇಶದಲ್ಲಿರುವುವು. ಅವುಗಳಲ್ಲಿ ಒಂದರ ಹೆಸರು “ನಾಶಪುರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತದೇಶದಲ್ಲಿರುವವು; ಇವುಗಳಲ್ಲಿ ಒಂದರ ಹೆಸರು ನಾಶಪುರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು “ನಾಶನದ ನಗರ.” ಆ ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:18
15 ತಿಳಿವುಗಳ ಹೋಲಿಕೆ  

“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಯೆಹೋವ ದೇವರು ತಮ್ಮನ್ನು ಈಜಿಪ್ಟಿನವರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವ ದೇವರನ್ನು ತಿಳಿದುಕೊಳ್ಳುವರು ಮತ್ತು ಬಲಿಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಯೆಹೋವ ದೇವರಿಗೆ ಪ್ರಮಾಣ ಮಾಡಿಕೊಂಡು ನೆರವೇರಿಸುವರು.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.


ಈಜಿಪ್ಟಿನಿಂದ ರಾಯಭಾರಿಗಳು ಬರುವರು. ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


ಆ ಕಾಲದಲ್ಲಿ ಭೂಲೋಕದಲ್ಲೆಲ್ಲಾ ಒಂದೇ ಭಾಷೆಯಿತ್ತು. ಭಾಷಾಭೇದವೇನೂ ಇರಲಿಲ್ಲ.


ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು