Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:11 - ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:11
61 ತಿಳಿವುಗಳ ಹೋಲಿಕೆ  

ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆ ದಿವಸದಲ್ಲಿ ಯೆಹೋವ ದೇವರು ಆಕಾಶದಲ್ಲಿರುವ ಆಕಾಶದವರ ಸೈನ್ಯವನ್ನೂ, ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸುವರು.


ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.


ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಆ ದಿವಸದಲ್ಲಿ” ನಾನು ಕುಂಟಾದವರನ್ನು ಒಟ್ಟುಗೂಡಿಸುವೆನು. ನಾನು ತಳ್ಳಿಬಿಟ್ಟದ್ದನ್ನೂ ಕಷ್ಟಪಡಿಸಿದವರನ್ನೂ ಒಂದಾಗಿ ಸೇರಿಸುವೆನು.


ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಆದರೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು.


ಆ ದಿವಸದಲ್ಲಿ ಯೆರೂಸಲೇಮಿಗೆ ಹೀಗೆಂದು ಹೇಳುವರು, “ಚೀಯೋನೇ, ನೀನು ಭಯಪಡಬೇಡ; ನಿನ್ನ ಕೈಗಳು ಬಲಹೀನವಾಗದಿರಲಿ.


ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.


“ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಆ ದಿವಸದಲ್ಲಿ,’ ಎದೋಮಿನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೇ?


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.


“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.


ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,” “ನೀನು ನನ್ನನ್ನು ಇನ್ನು ಮೇಲೆ, ‘ನನ್ನ ಒಡೆಯ’ ಎಂದು ಕರೆಯದೆ, ‘ನನ್ನ ಪತಿ’ ಎಂದು ಕರೆಯುವೆ.


“ ‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್ ಎಂದು ಕರೆಯುವರು.


ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು.


“ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ


ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಅದು ನಾನೇ ಎಂದು ಅವರು ಗ್ರಹಿಸುವರು.”


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.


ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.


ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು.


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ದೀನರನ್ನು ರಕ್ಷಿಸುತ್ತೀರಿ; ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ.


ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರ ಕಣ್ಣುಗಳು ಯಾವಾಗಲೂ ಅಹಂಕಾರದಿಂದ ಕೂಡಿರುತ್ತವೆ. ಅವರ ದೃಷ್ಟಿ ಅಸಹ್ಯವಾಗಿದೆ.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ,


ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಭೂಲೋಕದ ನ್ಯಾಯಾಧಿಪತಿಯೇ, ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ.


ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ.


ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ, ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡುತ್ತದೆ.


ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು