Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:20 - ಕನ್ನಡ ಸಮಕಾಲಿಕ ಅನುವಾದ

20 ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:20
17 ತಿಳಿವುಗಳ ಹೋಲಿಕೆ  

ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.


ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.


ನೀರು ಕೋಳಿ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.


ಆಗ ಅವರು, “ ‘ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ!” ಗುಡ್ಡಗಳಿಗೆ, “ನಮ್ಮನ್ನು ಮುಚ್ಚಿಕೊಳ್ಳಿರಿ!” ’ ಎಂದು ಹೇಳಲಾರಂಭಿಸುವರು.


ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.


ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.


“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.


ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು