Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:22 - ಕನ್ನಡ ಸಮಕಾಲಿಕ ಅನುವಾದ

22 ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:22
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.


ಅಧಿಪತಿಗಳಲ್ಲಿಯೂ ರಕ್ಷಿಸಲಾಗದ ಮಾನವರಲ್ಲಿಯೂ ಭರವಸವಿಡಬೇಡಿರಿ.


ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?


ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.


ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಒಣನೆಲದ ಮೇಲಿದ್ದ ಮೂಗಿನಿಂದ ಶ್ವಾಸಬೀಡುವ ಜೀವಿಗಳೆಲ್ಲವೂ ಸತ್ತು ಹೋದವು.


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.


ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ. ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ, ವ್ಯರ್ಥವಾಗಿಯೂ ಇವೆ.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು