Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:3 - ಕನ್ನಡ ಸಮಕಾಲಿಕ ಅನುವಾದ

3 ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:3
39 ತಿಳಿವುಗಳ ಹೋಲಿಕೆ  

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.


ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು.


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.


ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.


ಅವರು ಜನರನ್ನು ಬೆಟ್ಟಕ್ಕೆ ಕರೆಯಿಸಿ, ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಏಕೆಂದರೆ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು.”


ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.


ನೀವು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿದಾಗ, ನನ್ನ ತುಟಿಗಳಿಂದ ಸ್ತೋತ್ರವು ಪ್ರವಾಹಿಸಲಿ.


“ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.


ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ, ಅರಸರು ನಿನ್ನ ಉದಯದ ಕಾಂತಿಗೂ ಬರುವರು.


“ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.


ದೇವರು ನನ್ನ ಜೀವಮಾನದ ಬಲವನ್ನು ಕುಂದಿಸಿದ್ದಾರೆ, ನನ್ನ ದಿನಗಳನ್ನೂ ಕಡಿಮೆ ಮಾಡಿದ್ದಾರೆ.


ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ಆ ದಿವಸದಲ್ಲಿ ಈಜಿಪ್ಟಿನಿಂದ ಅಸ್ಸೀರಿಯಕ್ಕೆ ಹೋಗುವ ಒಂದು ರಾಜ ಮಾರ್ಗವಿರುವುದು. ಅಸ್ಸೀರಿಯದವರು ಈಜಿಪ್ಟಿಗೂ, ಈಜಿಪ್ಟಿನವರು ಅಸ್ಸೀರಿಯಕ್ಕೂ ಹೋಗಿ ಬರುವರು. ಈಜಿಪ್ಟಿನವರು, ಅಸ್ಸೀರಿಯರೊಂದಿಗೆ ಯೆಹೋವ ದೇವರನ್ನು ಆರಾಧಿಸುವರು.


ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು