Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:9 - ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಮನುಷ್ಯರು ನಮ್ರರಾಗುತ್ತಾರೆ; ಎಲ್ಲರೂ ತಲೆಬಾಗುತ್ತಾರೆ; ಅವರನ್ನು ಕ್ಷಮಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾನವನು ತಗ್ಗಿಹೋಗಿದ್ದಾನೆ, ಅಧೋಗತಿಗೆ ಇಳಿದಿದ್ದಾನೆ. ಸ್ವಾಮೀ, ಅವನಿಗೆ ಕ್ಷಮೆ ನೀಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ಅಧಮರಾಗಲಿ ಉತ್ತಮರಾಗಲಿ ತಗ್ಗಿಸಲ್ಪಡುವರು; (ಅವರನ್ನು ಕ್ಷವಿುಸಬೇಡ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:9
16 ತಿಳಿವುಗಳ ಹೋಲಿಕೆ  

ನರಮಾನವರು ತಗ್ಗಿಹೋಗುವರು. ಅಹಂಭಾವದ ಕಣ್ಣುಗಳು ಕಂಗೆಡುವುವು.


ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಅವರು ಕಟ್ಟುವವರ ಮುಂದೆ ನಿಮ್ಮನ್ನು ಕೆಣಕಿದ್ದರಿಂದ ನೀವು ಅವರ ಅಪರಾಧವನ್ನು ಮುಚ್ಚಬೇಡಿರಿ. ನಿಮ್ಮ ಮುಂದೆ ಇರುವ ಅವರ ಪಾಪಗಳನ್ನು ಅಳಿಸಿಬಿಡಬೇಡಿರಿ ಎಂದು ನಾನು ಪ್ರಾರ್ಥಿಸಿದೆ.


ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು.


ಇಂಥ ಉಪದೇಶಗಳು ತಾವೇ ತಂದುಕೊಂಡ ಆರಾಧನೆಯಲ್ಲಿಯೂ ಸುಳ್ಳು ದೀನತ್ವದಲ್ಲಿಯೂ ದೇಹದಂಡನೆಯಲ್ಲಿಯೂ ಜ್ಞಾನದ ತೋರಿಕೆಯುಳ್ಳದ್ದಾಗಿರುವುದು ನಿಜವೇ. ಆದರೆ ಇವು ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಪ್ರಯೋಜನವಿಲ್ಲದವುಗಳಾಗಿವೆ.


ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ.


ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ.


ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.


ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು