Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:11 - ಕನ್ನಡ ಸಮಕಾಲಿಕ ಅನುವಾದ

11 ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ದೂಮ’ ಕುರಿತ ದೈವೋಕ್ತಿ : “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೂಮದ ವಿಷಯವಾದ ದೈವೋಕ್ತಿ. ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು, ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು ಎಂಬ ಕೂಗು ಸೇಯೀರಿನಿಂದ ನನಗೆ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:11
24 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.


ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.


ಕರ್ತರು ನನಗೆ ಹೇಳಿದ್ದೇನೆಂದರೆ, “ಹೋಗು, ಕಾವಲುಗಾರರನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.


ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.


ಮಿಷ್ಮಾ, ದೂಮಾ, ಮಸ್ಸಾ, ಹದದ್, ತೇಮ,


ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.


ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,


ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.


ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ.


ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”


ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.


ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.


“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು