Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:4 - ಕನ್ನಡ ಸಮಕಾಲಿಕ ಅನುವಾದ

4 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ಭ್ರಮೆಗೊಂಡಿದೆ, ನಡುಕವು ನನ್ನನ್ನು ಆಕ್ರವಿುಸಿದೆ, ನಾನು ಅಪೇಕ್ಷಿಸುತ್ತಿದ್ದ ಸಂಜೆಹೊತ್ತೇ ನನಗೆ ಭಯಂಕರವಾಗಿ ಪರಿಣವಿುಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:4
19 ತಿಳಿವುಗಳ ಹೋಲಿಕೆ  

ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.


ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.


ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.


ಅವರು ಉರಿಗೊಂಡಿರುವಾಗ, ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, ಅವರು ಅದರಿಂದ ಸಂಭ್ರಮಪಟ್ಟು, ಎಂದಿಗೂ ಎಚ್ಚರಗೊಳ್ಳದೆ, ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಹಾಮಾನನು, “ಎಸ್ತೇರ್ ರಾಣಿಯು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೆ ಯಾರನ್ನು ಕರೆಯಲಿಲ್ಲ. ಮರುದಿನವೂ ಅರಸನೊಂದಿಗೆ ಔತಣಮಾಡಲು ನನ್ನನ್ನು ಆಹ್ವಾನಿಸಿದ್ದಾಳೆ.


ನಿಮ್ಮ ಹೃದಯದಲ್ಲಿನ ಪ್ರಾಣಭೀತಿ, ಹೆದರಿಕೆಯ ನಿಮಿತ್ತವೂ ನಿಮ್ಮ ಕಣ್ಣುಗಳು ನೋಡುವ ಭಯಂಕರ ನೋಟದಿಂದ ನೀವು ಮುಂಜಾನೆಯಲ್ಲಿ, “ಸಂಜೆ ಆಗಬೇಕು,” ಎನ್ನುವಿರಿ. ಸಂಜೆಯಲ್ಲಿ, “ಮುಂಜಾನೆ ಆಗಬೇಕು,” ಎನ್ನುವಿರಿ.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, ತನ್ನ ರೆಕ್ಕೆಗಳನ್ನು ಚಾಚಿ, ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ,


ಭಯವೂ ನಡುಗೂ ನನಗೆ ಬಂದಿವೆ; ಭೀತಿಯು ನನ್ನನ್ನು ಮುಚ್ಚಿದೆ.


ಆಗ ಅದೋನೀಯನ ಸಂಗಡ ಔತಣಕ್ಕೆ ಬಂದಿದ್ದ ಎಲ್ಲರೂ ಹೆದರಿಕೊಂಡು ಎದ್ದು, ತಮ್ಮ ತಮ್ಮ ಸ್ಥಳಗಳಿಗೆ ಹೊರಟು ಹೋದರು.


“ಓ, ಪಾರಿವಾಳದಂತೆ ನನಗೆ ರೆಕ್ಕೆಗಳು ಇರುತ್ತಿದ್ದರೆ, ಹಾರಿಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆ.


ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು