Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:11 - ಕನ್ನಡ ಸಮಕಾಲಿಕ ಅನುವಾದ

11 ಎರಡು ಗೋಡೆಗಳ ನಡುವೆ ಹಳೆಯ ಕೆರೆಯ ನೀರಿಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಕಾಲುವೆ ಮಾಡುತ್ತೀರಿ. ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸುವುದಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದವರನ್ನು ನೀನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದಿರಿ; ಆದರೆ ಇದನ್ನೆಲ್ಲಾ ನಡಿಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:11
15 ತಿಳಿವುಗಳ ಹೋಲಿಕೆ  

ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


“ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ


ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.


ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.


ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು