Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:12 - ಕನ್ನಡ ಸಮಕಾಲಿಕ ಅನುವಾದ

12 ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:12
31 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ನಿನ್ನ ಮುದ್ದುಮಕ್ಕಳಿಗೋಸ್ಕರ ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು.


ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.


ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.


ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.


ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.


ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.


ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,


“ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.


ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು.


ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.


ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.


ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.


ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ.


ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.


“ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ.


ನಿನಗಾಗಿ ತಲೆ ಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.


ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.


ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ ಸಂತೋಷ ಪಡಬೇಡ. ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. ಎಲ್ಲಾ ಧಾನ್ಯದ ಕಣಗಳಲ್ಲಿ ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ.


ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.


ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು