Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:14 - ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:14
17 ತಿಳಿವುಗಳ ಹೋಲಿಕೆ  

“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.


ಆದ್ದರಿಂದ ‘ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿಯಿಂದಲಾದರೂ, ಅರ್ಪಣೆಯಿಂದಲಾದರೂ ಪ್ರಾಯಶ್ಚಿತ್ತವಾಗುವದಿಲ್ಲ, ಎಂದು ನಾನು ಏಲಿಯ ಮನೆಯನ್ನು ಕುರಿತು ಪ್ರಮಾಣಮಾಡಿದೆನು,’ ” ಎಂದರು.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.


ಆದರೆ ಸೌಲನು ಬರುವುದಕ್ಕೆ ಒಂದು ದಿವಸ ಮುಂಚೆ, ಯೆಹೋವ ದೇವರು ಸಮುಯೇಲನಿಗೆ ತಿಳಿಯಪಡಿಸಿದ್ದೇನೆಂದರೆ,


ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


“ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, ವೃದ್ಧನೂ ಇರುವುದಿಲ್ಲ. ಮಗುವು ನೂರು ವರುಷದವನಾಗಿ ಸಾಯುವುದು. ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ.


ಆದ್ದರಿಂದ ಸೌಲನ ಮಗಳಾದ ಮೀಕಲಳು ತನ್ನ ಮರಣದ ದಿವಸದ ಮಟ್ಟಿಗೂ ಮಕ್ಕಳು ಆಗಲಿಲ್ಲ.


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು