Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:12 - ಕನ್ನಡ ಸಮಕಾಲಿಕ ಅನುವಾದ

12 ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಟ್ಟಣದಲ್ಲಿ ಹಾಳೇ ಉಳಿದಿದೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:12
12 ತಿಳಿವುಗಳ ಹೋಲಿಕೆ  

ಕೇಡು ಯೆಹೋವ ದೇವರಿಂದ ಇಳಿದು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು ವೇದನೆ ಪಡುತ್ತಾರೆ.


ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.


ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.


ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.


ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.


ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.


ನಾನು ನಿನ್ನ ಮುಂದೆ ಹೋಗಿ ಬೆಟ್ಟಗುಡ್ಡಗಳನ್ನು ಸಮಮಾಡಿ, ಕಂಚಿನ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು