Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಭಯದ ಸಪ್ಪಳದಿಂದ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂವಿುಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:18
26 ತಿಳಿವುಗಳ ಹೋಲಿಕೆ  

ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು; ಪರ್ವತಗಳ ಅಸ್ತಿವಾರಗಳು ಸಹ ಕದಲಿದವು.


ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.


ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.


ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.


ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ, ಕಂಚಿನ ಬಾಣ ಅವನನ್ನು ತಿವಿಯುವುದು.


ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.


ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.


ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ.


ಮೋವಾಬಿನ ನಿವಾಸಿಯೇ, ಹೆದರಿಕೆಯೂ, ಕುಳಿಯೂ, ಬೋನೂ ನಿನ್ನ ಮೇಲೆ ಇರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಭಯವನ್ನೂ, ನಾಶವನ್ನೂ ನಾವು ಅನುಭವಿಸಿದ್ದೇವೆ.


ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ.


ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,


ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು