Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:21 - ಕನ್ನಡ ಸಮಕಾಲಿಕ ಅನುವಾದ

21 ಆ ದಿವಸದಲ್ಲಿ ಯೆಹೋವ ದೇವರು ಆಕಾಶದಲ್ಲಿರುವ ಆಕಾಶದವರ ಸೈನ್ಯವನ್ನೂ, ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯವಿಚಾರಣೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:21
23 ತಿಳಿವುಗಳ ಹೋಲಿಕೆ  

ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.


ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು. ಲೋಕವು ಸೊರಗಿ ಬಾಡಿಹೋಗುವುದು. ಆಕಾಶವು ಭೂಮಿಯೊಂದಿಗೆ ಕುಗ್ಗಿಹೋಗುವುದು.


ಆದ್ದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವುವು. ಇತರ ಜನಾಂಗಗಳ ಆಸ್ತಿ ನಿನ್ನ ಬಳಿಗೆ ತರುತ್ತಿರುವರು. ಅವರ ಅರಸರು ಸಹ ಬಂಧುಗಳಾಗಿ ನಿನ್ನ ಮೆರವಣಿಗೆಯಲ್ಲಿ ಮುನ್ನಡೆಸಿದರು ಹಗಲುರಾತ್ರಿ ಅವು ಮುಚ್ಚಿರುವುದಿಲ್ಲ.


ಯೆಹೋವ ದೇವರ ಯಜ್ಞದ ದಿನದಲ್ಲಿ ನಾನು ಪ್ರಧಾನರನ್ನು, ರಾಜಪುತ್ರರನ್ನು ಮತ್ತು ವಿದೇಶಿಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.


“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.


ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು